Skip to main content

ಬದುಕಿನಲ್ಲಿ ಏನನ್ನು ಮಾಡಬೇಕು , ಏನನ್ನು ಮಾಡಬಾರದು?

ಶ್ರೀ ಗುರು ಶಂಕರ ಭಗವತ್ಪಾದರಿಂದ ರಚಿತವಾದ
ಪ್ರಶ್ನೋತ್ತರಮಾಲಿಕಾ , ಬದುಕಿನಲ್ಲಿ ಏನನ್ನು
ಮಾಡಬೇಕು , ಏನನ್ನು ಮಾಡಬಾರದೆಂದು ಬಹಳ
ಸುಂದರ , ಸರಳವಾಗಿ ತಿಳಿಸುತ್ತದೆ..

ಈ ಲೇಖನವನ್ನು ತಪ್ಪದೇ ಓದಿ..




ಪ್ರಶ್ನೆ- ಭಗವನ್ ಕಿಮ್ ಉಪಾದೇಯಮ್..?
ಪೂಜ್ಯರೇ ಜೀವನದಲ್ಲಿ
ಏನನ್ನು ಅನುಸರಿಸಬೇಕು ?
ಉತ್ತರ - ಗುರುವಚನಮ್
ಜೀವನದಲ್ಲಿ ಗುರು-ಹಿರಿಯರ
ಮಾತನ್ನು ಅನುಸರಿಸಬೇಕು.

ಪ್ರಶ್ನೆ - ಕಃ ಪಥ್ಯತರಃ ?
ಪ್ರಪಂಚದಲ್ಲಿ ಹಿತಕರವಾದದ್ದು ಯಾವುದು ?
ಉತ್ತರ - ಧರ್ಮಃ
ಧರ್ಮವೇ ಹಿತಕರವಾದದ್ದು.

ಪ್ರಶ್ನೆ - ಕಿಮ್ ವಿಷಮ್ ?
ಯಾವುದು ವಿಷ ?
ಉತ್ತರ - ಅವಧೀರಣಾ ಗುರುಷು
ಗುರು-ಹಿರಿಯರಿಗೆ ಮಾಡಿದ ಅವಮಾನ,ಅಗೌರವವೇ ವಿಷ.

ಪ್ರಶ್ನೆ - ಕಿಮ್ ಮನುಜೇಷು ಇಷ್ಟತಮಮ್ ?
ಮನುಷ್ಯರಲ್ಲಿ ಇರಲೇಬೇಕಾದ ಶ್ರೇಷ್ಠ ಗುಣ
ಯಾವುದು ?
ಉತ್ತರ - ಸ್ವಪರಹಿತಾಯ ಉದ್ಯತಂ ಜನ್ಮ
ಯಾವಾಗಲೂ ತನ್ನ ಮತ್ತು ಇತರರ ಸುಖಕ್ಕಾಗಿ
ಜೀವನವನ್ನು ತೊಡಗಿಸಿಕೊಳ್ಳುವುದು.

ಪ್ರಶ್ನೆ - ಕೇ ಚ ದಸ್ಯವಃ ?
ಕಳ್ಳರು ಯಾರು ?
ಉತ್ತರ - ವಿಷಯಾಃ
ಸುಖಪಭೋಗ
ವಸ್ತುಗಳೇ ಕಳ್ಳರು (ಅವು ಇಂದ್ರಿಯಗಳ ಮೂಲಕ
ಮನಸನ್ನು
ಅಪಹರಿಸುತ್ತವೆ )

ಪ್ರಶ್ನೆ - ಕೋ ವೈರೀ ?
ನಮ್ಮ ಶತ್ರು ಯಾರು ?
ಉತ್ತರ - ಯಸ್ತು ಅನುದ್ಯೋಗಃ
ನಿರುದ್ಯೋಗವೇ ನಮ್ಮ ಶತ್ರು.

ಪ್ರಶ್ನೆ - ಕಿಮ್ ಗುರುತಾಯಾಂ ಮೂಲಮ್ ?
ಶ್ರೇಷ್ಠತೆಯ ಮೂಲ ಯಾವುದು ?
ಉತ್ತರ - ಯತ್ ಏತತ್ ಅಪ್ರಾರ್ಥನಮ್ ನಾಮ ಇತರರಲ್ಲಿ ಏನನ್ನೂ ಅಂಗಲಾಚದಿರುವುದೇ ಜೀವನದ
ಶ್ರೇಷ್ಠತೆ

ಪ್ರಶ್ನೆ - ಕಿಮ್ ದುಃಖಮ್ ?
ದುಃಖವೆಂದರೇನು..?
ಉತ್ತರ - ಅಸಂತೋಷಃ
ಸಂತೋಷವನ್ನು ಕಳೆದುಕೊಂಡಾಗಿನ ಅವಸ್ಥೆ.

ಪ್ರಶ್ನೆ - ಕಿಮ್ ಜಾಡ್ಯಮ್ ?
ಆಲಸ್ಯತನವು ಯಾವುದು ?
ಉತ್ತರ - ಪಾಠತೋSಪಿ ಅನಭ್ಯಾಸಃ
ವಿದ್ಯಾವಂತನಾಗಿಬಿಟ್ಟೆನೆಂದು ತಿಳಿದು , ಅಧ್ಯಯನ
ಮಾಡದಿರುವುದು.

ಪ್ರಶ್ನೆ - ನಲಿನೀ-ದಲ-ಗತ-ಜಲವತ್-ತರಲಂ
ಕಿಮ್ ?
ಕಮಲದ ಎಲೆಯ ಮೇಲಿನ ನೀರಿನಂತೆ
ಚಂಚಲವಾದದ್ದು ಯಾವುದು ?
ಉತ್ತರ - ಯೌವ್ವನಂ - ಧನಂ ಚ ಆಯುಃ
ತಾರುಣ್ಯ,ಸಂಪತ್ತು ಮತ್ತು ಆಯುಷ್ಯ
ಇವು ಕಮಲದ ಎಲೆ ಮೇಲಿನ ನೀರಿನಂತೆ
ಚಂಚಲವಾದವುಗಳು.

ಪ್ರಶ್ನೆ - ಕಿಮ್ ಚ ಅನರ್ಘಮ್ ?
ಬೆಲೆ ಕಟ್ಟಲಾಗದ್ದು ಯಾವುದು ?
ಉತ್ತರ - ಯದವಸರೇ ದತ್ತಮ್ ?
ಸರಿಯಾದ ಸಮಯದಲ್ಲಿ ಅನ್ಯರಿಗೆ ದಾನ ಮಾಡಿದ್ದು.

ಪ್ರಶ್ನೆ - ಆಮರಣಾತ್ ಕಿಮ್ ಶಾಲ್ಯಮ್ ?
ಸಾಯುವವರೆಗೂ ಬಾಣದಂತೆ
ಚುಚ್ಚುತ್ತಲೇ ಇರುವುದು ಯಾವುದು ?
ಉತ್ತರ - ಪ್ರಚ್ಛನ್ನಂ ಯತ್ ಕೃತಂ ಪಾಪಮ್
ಬಚ್ಚಿಟ್ಟುಕೊಂಡ ಪಾಪಕಾರ್ಯ
ಸಾಯುವವರೆಗೂ ಬಾಣದಂತೆ
ಚುಚ್ಚತ್ತಲೇ ಇರುತ್ತದೆ .

ಪ್ರಶ್ನೆ - ಕುತ್ರ ವಿಧೇಯೋ ಯತ್ನಃ ?
ಯಾವ ವಿಷಯದಲ್ಲಿ ಪ್ರಯತ್ನವನ್ನು ಮಾಡಬೇಕು ?
ಉತ್ತರ - ವಿದ್ಯಾಭ್ಯಾಸೇ ಸದೌಷಧೇ ದಾನೇ
ವಿಧ್ಯಾಭ್ಯಾಸದಲ್ಲಿ ,ಒಳ್ಳೆಯ ಔಷಧೋಪಚಾರದಲ್ಲಿ
ಮತ್ತು ದಾನ ಮಾಡುವಲ್ಲಿ ಪ್ರಯತ್ನ
ಮಾಡಬೇಕು..

ಪ್ರಶ್ನೆ - ಕೇನ ಜಿತಂ ಜಗದೇತತ್ ?
ಈ ಜಗತ್ತನ್ನು ಯಾರು ಗೆಲ್ಲುತ್ತಾರೆ ?
ಉತ್ತರ - ಸತ್ಯ-ತಿತಿಕ್ಷಾವತಾ ಪುಂಸಾ
ಸತ್ಯ ಮತ್ತು ಸಹನೆಗಳಿಂದ ಕೂಡಿದ ಮನುಷ್ಯನು ಈ
ಜಗತ್ತನ್ನು ಗೆಲ್ಲುತ್ತಾನೆ.

ಪ್ರಶ್ನೆ - ಕಸ್ಯ ವಶೇ ಪ್ರಾಣಿಗಣಃ ?
ಪ್ರಾಣಿ ಸಮೂಹವು ಯಾರ ಅಧೀನದಲ್ಲಿರುತ್ತದೆ ?
ಉತ್ತರ - ಸತ್ಯ-ಪ್ರಿಯಭಾಷಿಣೋ ವಿನೀತಸ್ಯ
ಪ್ರಾಣಿ
ಸಮೂಹವು ಸತ್ಯವದುದನ್ನು ಮತ್ತು ಪ್ರಿಯವಾದುದನ್ನು ಮಾತನಾಡುವ
ವಿನಯಶಾಲಿಯ ವಶದಲ್ಲಿ ಇರುತ್ತದೆ.

ಪ್ರಶ್ನೆ - ಕ್ವ ಸ್ಥಾತವ್ಯಮ್ ?
ಎಲ್ಲಿ ಸ್ಥಿರವಾಗಿ ನಿಲ್ಲಬೇಕು ?
ಉತ್ತರ - ನ್ಯಾಯ್ಯೇ ಪಥಿ ದೃಷ್ಟ - ಅದೃಷ್ಟ -
ಲಾಭಾಢ್ಯೇ
ದೃಷ್ಟ ಮತ್ತು ಅದೃಷ್ಟ
(ಕಂಡು ಕಾಣದ )ಲಾಭದಿಂದ ಸಮೃದ್ಧವಾದ
ನ್ಯಾಯಯುತವಾದ
ಮಾರ್ಗದಲ್ಲಿ ಸದಾ ನಿಲ್ಲಬೇಕು.

ಪ್ರಶ್ನೆ - ಕಿಮ್ ದಾನಮ್ ?
ದಾನವು ಯಾವುದು ?
ಉತ್ತರ - ಅನಾಕಾಂಕ್ಷಮ್
ಪ್ರತಿಫಲವನ್ನು ಬಯಸದೇ ಮಾಡಿದ
ದಾನವೇ ನಿಜವಾದ ದಾನವು .

ಪ್ರಶ್ನೆ - ಕಿಮ್ ಮಿತ್ರಮ್ ?
ನಿಜವಾದ ಮಿತ್ರನು ಯಾರು ?
ಉತ್ತರ - ಯೋ ನಿವಾರಯತಿ ಪಾಪಾತ್
ಪಾಪ ಕಾರ್ಯಗಳನ್ನು ಮಾಡದಂತೆ
ತಡೆಯುವನು ನಿಜವಾದ ಮಿತ್ರನು.

ಪ್ರಶ್ನೆ - ಕಿಮ್ ಶೋಚ್ಯಮ್ ?
ದುಃಖಕರವಾದುದು ಯಾವುದು ?
ಉತ್ತರ - ಕಾರ್ಪಣ್ಯಮ್
ದಾರಿದ್ರ್ಯವು (ಬಡತನವು) ಕಷ್ಟಕರವಾದದ್ದು..

ಪ್ರಶ್ನೆ - ಕಃ ಪರಿಹರ್ಯೋ ದೇಶಃ ?
ಎಂತಹ ದೇಶದಿಂದ ದೂರ ಇರಬೇಕು ?
ಉತ್ತರ - ಪಿಶುನಯುತೋ ಲುಬ್ಧಭೂಪಶ್ಚ
ಕ್ರೂರರಾದ ಪ್ರಜೆಗಳುಳ್ಳ ಮತ್ತು ಲೋಭಿಯಾದ
ರಾಜನುಳ್ಳ ದೇಶವನ್ನು ತೊರೆಯಬೇಕು.

ಪ್ರಶ್ನೆ - ಇಹ ಭುವನೇ ಕೋ ಶೋಚ್ಯಃ ?
ವಿಶ್ವದಲ್ಲಿ ಸದಾ ದುಃಖದಲ್ಲಿರುವವನು ಯಾರು ?
ಉತ್ತರ - ಸತ್ಯಪಿ ಭುವನೇ ಯೋ ನ ದಾತಾ
ಸಂಪತ್ತಿದ್ದರೂ ದಾನಿಯಾಗಿರದವನೇ ದುಃಖಿ.

ಪ್ರಶ್ನೆ - ಕಿಮಹರ್ನಿಶಂ ಅನುಚಿಂತ್ಯಮ್ ?
ಹಗಲಿರುಳು (ಸದಾಕಾಲವೂ )ಯಾವುದನ್ನು ಕುರಿತು ಚಿಂತಿಸಬೇಕು ?
ಉತ್ತರ - ಭಗವಚ್ಚರಣಮ್ ನ ಸಂಸಾರಃ
ಹಗಲಿರುಳು ಪರಮಾತ್ಮನ ಚರಣದ ಚಿಂತೆ
ಮಾಡಬೇಕೇ ವಿನಃ ಸಂಸಾರವನ್ನಲ್ಲ .

ಪ್ರಶ್ನೆ - ಕಿಮ್ ಸಂಪಾದ್ಯಂ ಮನುಜೈಃ ?
ಮಾನವರು ಏನನ್ನು ಸಂಪಾದಿಸಬೇಕು ?
ಉತ್ತರ - ವಿದ್ಯಾ , ವಿತ್ತಮ್ , ಬಲಂ , ಯಶಃ ,
ಪುಣ್ಯಮ್
ಮಾನವರು ವಿದ್ಯೆ ,ಸಂಪತ್ತು ,ಬಲ ,ಕೀರ್ತಿ
ಮತ್ತು ಪುಣ್ಯಗಳನ್ನು ಸಂಪಾದಿಸಬೇಕು .

ಪ್ರಶ್ನೆ - ಕಃ ಸರ್ವಗುಣವಿನಾಶೀ ?
ಎಲ್ಲ
ಗುಣಗಳನ್ನು ನಾಶಪಡಿಸುವಂಥಹದು ಯಾವುದು ?
ಉತ್ತರ - ಲೋಭಃ
ಲೋಭವು ಸರ್ವ ಗುಣಗಳನ್ನು ನಾಶ
ಪಡಿಸುವಂತಹದು.

ಪ್ರಶ್ನೆ - ಶತ್ರುಶ್ಚ ಕಃ ?
ವೈರಿಯು ಯಾರು ?
ಉತ್ತರ - ಕಾಮಃ
ಕಾಮವೇ ವೈರಿಯು .

ಪ್ರಶ್ನೆ - ಕಾ ಸುರಕ್ಷ್ಯಾ
ಸಂರಕ್ಷಿ ಸಲ್ಪಡತಕ್ಕಂಥಹದು ಯಾವುದು ?
ಉತ್ತರ - ಕೀರ್ತಿಃ , ಪತಿವ್ರತಾ , ನೈಜಬುದ್ಧಿಶ್ಚ
ಕೀರ್ತಿ ,ಪತಿವ್ರತೆ ಮತ್ತು ಸ್ವಂತ ಬುದ್ಧಿ (ಸ್ವಂತ
ವಿಚಾರ ಶಕ್ತಿ ) ಇವು ಸಂರಕ್ಷಿಸಲು ಅರ್ಹ .

ಪ್ರಶ್ನೆ - ಕಾ ಕಲ್ಪಲತಾ ಲೋಕೇ ?
ಜಗತ್ತಿನ್ನಲ್ಲಿ ಕಲ್ಪಲತೆ ಯಾವುದು ?
(ಬೇಡಿದ್ದನ್ನು ,ಬಯಸಿದ್ದನ್ನು ಕೊಡುವ ಬಳ್ಳಿ )
ಉತ್ತರ - ಸಚ್ಛಿಷ್ಯಾಯ ಅರ್ಪಿತಾ ವಿದ್ಯಾ
ಒಳ್ಳೆಯ ಶಿಷ್ಯನಿಗೆ ಗುರುವು ನೀಡಿದ ವಿದ್ಯೆಯು
ಜಗತ್ತಿನಲ್ಲಿ ಕಲ್ಪಲತೆ .

ಪ್ರಶ್ನೆ - ಪಾತಕಂ ಚ ಕಿಮ್ ?
ಪಾತಕವು ಯಾವುದು ?
ಉತ್ತರ - ಹಿಂಸಾ
ಹಿಂಸೆಯೇ(ಕ್ರೂರತೆ) ಪಾತಕವು.

ಪ್ರಶ್ನೆ - ಸಂಭಾವಿತಸ್ಯ ಮರಣಾತ್ ಅಧಿಕಂ ಕಿಮ್ ?
ಒಳ್ಳೆಯವನಿಗೆ ಸಾವಿಗಿಂತಲೂ
ಹೆಚ್ಚು ದುಃಖದಾಯಕ ಯಾವುದು ?
ಉತ್ತರ - ದುರ್ಯಶೋ ಭವತಿ
ಅಪಕೀರ್ತಿಯು ಮರಣಕ್ಕಿಂತಲೂ
ಹೆಚ್ಚು ದುಃಖದಾಯಕ.

ಪ್ರಶ್ನೆ - ಕೋ ವರ್ಧತೇ ?
ಯಾರು ಪ್ರಗತಿ ಯನ್ನು ಹೊಂದುತ್ತಾರೆ ?
ಉತ್ತರ - ವಿನೀತಃ
ವಿನಮ್ರ ನಾದವನು (ವಿನಯಶಾಲಿಯು )
ಪ್ರಗತಿಯನ್ನು ಹೊಂದುತ್ತಾನೆ .

ಪ್ರಶ್ನೆ - ಕಿಮ್ ಭಾಗ್ಯಂ ದೇಹವತಾಮ್ ?
ದೇಹಿಗಳಿಗೆ (ಮನುಷ್ಯರಿಗೆ)
ಭಾಗ್ಯವು ಯಾವುದು ?
ಉತ್ತರ - ಆರೋಗ್ಯಮ್
ಆರೋಗ್ಯವೇ ಭಾಗ್ಯವು .

ಪ್ರಶ್ನೆ - ಕೋ ಜಗದ್ಭರ್ತಾ ?
ಜಗತ್ತಿನ ಸಂರಕ್ಷಕನ್ಯಾರು ?
ಉತ್ತರ - ಸೂರ್ಯಃ
ಸೂರ್ಯ.

ಪ್ರಶ್ನೆ - ಸರ್ವೇಷಾಂ ಕೋ ಜೀವನಹೇತುಃ ?
ಎಲ್ಲರ ಬದುಕಿಗೆ ಕಾರಣನು ಯಾರು ?
ಉತ್ತರ - ಸ ಪರ್ಜನ್ಯಃ
ಪರ್ಜನ್ಯನು (ಮಳೆ ) ಎಲ್ಲರ ಬದುಕಿಗೆ ಕಾರಣನು .

ಪ್ರಶ್ನೆ - ಕಃ ಶೂರಃ ?
ಶೂರನು ಯಾರು ?
ಉತ್ತರ - ಯೋ ಭೀತತ್ರಾತಾ
ಭೀತನಾದವನನ್ನು ಕಾಪಾಡುವವನು ಶೂರನು .

ಪ್ರಶ್ನೆ - ತ್ರಾತಾ ಚ ಕಃ ?
ಮತ್ತೆ ಕಾಪಾಡುವವನು ಯಾರು ?
ಉತ್ತರ - ಸ ಗುರುಃ
ಗುರುವೇ ಕಾಪಾಡುವವನು.

ಪ್ರಶ್ನೆ - ಪ್ರತ್ಯಕ್ಷದೇವತಾ ಕಾ ?
ಪ್ರತ್ಯಕ್ಷ(ಸಾಕ್ಷಾತ್ ) ದೇವತೆ ಯಾರು ?
ಉತ್ತರ - ಮಾತಾ
ತಾಯಿಯೇ ಪ್ರತ್ಯಕ್ಷ ದೇವತೆಯು .

ಪ್ರಶ್ನೆ - ಪೂಜ್ಯೋ ಗುರುಶ್ಚ ಕಃ ?
ಪೂಜ್ಯ ಗುರುವು ಯಾರು ?
ಉತ್ತರ - ತಾತಃ
ತಂದೆಯೇ ಪೂಜ್ಯ ಗುರುವು .

ಪ್ರಶ್ನೆ - ಪಾತ್ರಂ ಕಿಮ್ ಅನ್ನದಾನೇ ?
ಅನ್ನದಾನಕ್ಕೆ ಅರ್ಹನಾರು ?
ಉತ್ತರ - ಕ್ಷುಧಿತಮ್
ಹಸಿದವನು ಅನ್ನದಾನಕ್ಕೆ ಅರ್ಹನು .

ಲೋಕಾಃ ಸಮಸ್ತಾಃ ಸುಖಿನೋ ಭವಂತು.

ಜೀವನದಲ್ಲಿ ಇಷ್ಟು ಪ್ರಶ್ನೆಗಳಿಗೆ ಉತ್ತರ
ಕಂಡುಕೊಂಡರೆ ಸಾಕು..
ತತ್ವಜ್ಞಾನವನ್ನರಿಯಲು
ಇನ್ನ್ಯಾವ ಶಾಸ್ತ್ರ-ಪುರಾಣಗಳ ಅಗತ್ಯತೆಯಿಲ್ಲ..

Comments

Popular posts from this blog

ಶ್ರೀ ಚಕ್ರ ಮತ್ತು ಅದರ ಮಹಿಮೆ

ಶ್ರೀಚಕ್ರ ಅತ್ಯಂತ ಮಹಿಮಾನ್ವಿತ ಚಕ್ರ. ಅನಂತ, ಅದ್ಭುತ ಸೃಷ್ಟಿಯ ದೈವೀ ತಂತ್ರದ ಚೌಕಟ್ಟು ಸೃಷ್ಟಿಯ ಜನನಿ ಶ್ರೀ ಲಲಿತೆಯ ಮೂರ್ತ ರೂಪದ ರೇಖಾಯಂತ್ರ. ಆದಿ ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿದೇವಿಯ ಸಾತ್ವಿಕ ರೂಪವು ಉಗಮಿಸುವಂತೆ ಮಾಡಿದರು. ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಜೊತೆಗೆ ಶಬ್ಧವನ್ನು ದೃಶ್ಯರೂಪವಾಘಿ ಪರಿವರ್ತಿಸುವ ವಿಜ್ಞಾನ ಶಬ್ಧ ಹಾಗೂ ಕಂಪನಗಳ ಪ್ರಭಾವದ ಅರಿವು ಮೂಡಿಸುತ್ತಿದೆ, ಶ್ರೀಚಕ್ರದ ಮೇಲೆ ಇಟ್ಟ ದೃಷ್ಟಿ ನರಮಂಡಲದಲ್ಲಿ ಉಂಟಾಗುವ ಕಂಪನ ಇಇಜಿಯಲ್ಲಿ (ಎಲೆಕ್ಟ್ರೋ ಎನ್ ಕೆಫಲೋಗ್ರಾಫ್) ಆಲ್ಫಾ ಅಲೆ ಹೊರಡಿಸುತ್ತದೆ. ಧ್ಯಾನ ಸ್ಥಿತಿಯಲ್ಲೂ ಈ ಅಲೆ ನಿಧಾನಗತಿಯಲ್ಲಿ ಹೊರಹೊಮ್ಮುತ್ತದೆ, ಯಾವುದೇ ಇತರ ಚಕ್ರ ವೀಕ್ಷಿಸಿದಾಗ ಇಇಜಿ ಅಲೆಗಳಲ್ಲಿ ಬದಲಾವಣೆ ಕಂಡುಬರುವುದಿಲ್ಲ, ಶಕ್ತಿಯುತ ಅಣು ಕ್ಷಣಗಳಿಂದಾದ ಅಲೆ ವಿದ್ಯುತ್ ಅಯಸ್ಕಾಂತ ಬಲಕಾರಕ ಶಕ್ತಿ ಸಮಾಗಮಕ್ಕೆ ನಾಂದಿ, ಶ್ರೀಚಕ್ರದ ಮೂಲಕ ದಿವ್ಯ ಮಂತ್ರೋಚ್ಚಾರಗಳಿಂದಾದ ಶಬ್ಧ ಬ್ರಹ್ಮ ಶಕ್ತಿ ಇದನ್ನು ಸಾಧಿಸುತ್ತದೆಂದು ಭಾವಿಸಬಹುದು, ಒಂದು ದೃಷ್ಟಿಯಲ್ಲಿ ಆದಿ ಶಂಕರಾಚಾರ್ಯರನ್ನು ಕಣ ಭೌತ ಶಾಸ್ತ್ರದ ಪಿತಾಮಹ ಎನ್ನಬಹುದು. ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನೇ ನಿಗ್ರಹಿಸಿದರು, ಶ್ರೀ ಸೌಂದ...

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ ಅಂದರೆ .. ಎಂಜಲು, ಶಿವನ ನಿರ್ಮಾಲ್ಯ, ವಾಂತಿ, ಹೆಣದ ಬಟ್ಟೆ, ಕಾಗೆಯ ಮಲದಿಂದ ಹುಟ್ಟಿದ್ದು. ಈ ಐದು ಅತ್ಯಂತ ಪವಿತ್ರವಾದವುಗಳು...!! ಎಂದು . ೧. ಉಚ್ಚಿಷ್ಟಮ್ - ಎಂದರೆ ಎಂಜಲು . ಹಾಲು ಕರುವಿನ ಎಂಜಲು. ಹಸುವಿನ ಹಾಲನ್ನು ಕರು ಕುಡಿದು ಹಾಗೇ ಬಿಟ್ಟಿರುತ್ತದೆ . ಆ ಎಂಜಲು ಹಾಲನ್ನೇ ನಾವು ಉಪಯೋಗಿಸುತ್ತೇವೆ. ಕರುವಿನಿಂದ ಎಂಜಲಾದ ಹಾಲು ದೇವರಿಗೆ , ಪಂಚಾಮೃತಾಭಿಷೇಕಕ್ಕೆ ಬೇಕಾದ ಅತ್ಯಂತ ಪವಿತ್ರ ವಸ್ತು. ೨. ಶಿವನಿರ್ಮಾಲ್ಯಮ್ - ಎಂದರೆ ಶಿವನ ಜಟೆಯಿಂದ ಹೊರಗೆ ಬಂದ ಗಂಗೆ . ಗಂಗಾ ನದಿ ಸ್ವರ್ಗಲೋಕದಿಂದ ಭೂಲೋಕಕ್ಕೆ ಬರುವಾಗ ಅಹಂಕಾರದಿಂದ ಬರುತ್ತಿದ್ದಳು . ಆಗ ಗಂಗೆಯ ಗರ್ವವನ್ನು ದಮನ ಮಾಡುವುದಕ್ಕಾಗಿ ಪರಶಿವನು ಆ ಗಂಗೆಯನ್ನು ತನ್ನ ಜಟೆಯ ಮಧ್ಯೆ ಕಟ್ಟಿಹಾಕಿಬಿಟ್ಟ.  ಅನಂತರ ಆ ಜಟೆಯಿ೦ದ ಗಂಗಾನದಿಯನ್ನು ಹೊರಕೆ ಹಾಕಿದ.  ಶಿವನ ಜಟೆಯಲ್ಲಿದ್ದು ಅಲ್ಲಿಂದ ಮುಕ್ತಳಾದ್ದರಿಂದ ಗಂಗಾನದಿಯು ಶಿವನ ನಿರ್ಮಾಲ್ಯವಾಯಿತು.  ಆದರೂ ಈ ಗಂಗೆಯು ಪವಿತ್ರ. ೩. ವಮನಮ್ - ಎಂದರೆ ವಾಂತಿ . ಜೇನುತುಪ್ಪ . ಜೇನುಹುಳುಗಳು ಬೇರೆಬೇರೆಯ ಗಿಡಮರಗಳಿಂದ ಮಕರಂದವನ್ನು ಬಾಯಲ್ಲಿ ಹಿಡಿದು ತಂದು,  ಬಾಯಿಂದಲೇ ಆ ಮಕರಂದವನ್ನು ಗೂಡಿನಲ್ಲಿ ಇಟ್ಟಿರುತ್ತವೆ.  ಅದೇ ಜೇನು ತುಪ್ಪ.  ಇದು ಜೇನುಹುಳುಗಳ ವಮನ. ಆದರೆ ಜೇನು...

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು? ಏಕೆ?

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು?  ಏಕೆ? ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು. ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ| ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:|| ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ. ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು  ?  ಏಕೆ? ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ. ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇ...