Skip to main content

ಬ್ರಾಹ್ಮಣ ಅಂದರೆ ಏನು?

ಬ್ರಾಹ್ಮಣ ಅಂದರೆ ಏನು ಎಂಬುದನ್ನು ಪರೀಕ್ಷಿಸೋಣ..

ಅದು ಒಂದು ಜೀವವೆ?ಅಥವಾ ಅದು ಶರೀರವೆ?
ಇಲ್ಲಾ
 ಅದೊಂದು ವರ್ಗವೆ? ಜ್ಞಾನವೆ? ಕರ್ಮವೆ? ಅಥವಾ ಅದೊಂದು ಧಾರ್ಮಿಕ ಕ್ರಿಯೆಯೆ?ಯಾವುದನ್ನು ಬ್ರಾಹ್ಮಣ ಎನ್ನುತ್ತೇವೆ ??ನೋಡೋಣ...

ಜೀವವು ಬ್ರಾಹ್ಮಣವೆ?

ಎಂದು ಪ್ರಾರಂಭಿಸಿದರೆ ಉತ್ತರ ಅಲ್ಲ ಎಂದಾಗುತ್ತದೆ.

ಯಾಕೆಂದರೆ ಪೂರ್ವಜನ್ಮ ಹಾಗೂ ಪುನರ್ಜನ್ಮಗಳಲ್ಲಿ ಅದೇ ಜೀವ ಮುಂದುವರಿಯುತ್ತದೆ. ಪ್ರಾರಬ್ಧ ಕರ್ಮದಿಂದ ಕೆಲವೊಮ್ಮೆ  ವಿಭಿನ್ನ ಪ್ರಾಣಿ ಪಕ್ಷಿಗಳಾಗಿಯೂ ಅದೇ ಜೀವ ಮುಂದುವರಿಯುವುದರಿಂದ ಜೀವ ಎಂಬುದು ಬ್ರಾಹ್ಮಣ ಅಲ್ಲ.

ಹಾಗಾದರೆ ದೇಹ ಬ್ರಾಹ್ಮಣವೆ?

 ಅಲ್ಲ, ಅದು ಪಂಚಭೂತಗಳಿಂದ ಮಾಡಲ್ಪಟ್ಟು ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಮತ್ತು ಶೂದ್ರ ಎಂಬ ಎಲ್ಲ ಮಾನವರಿಗೂ ಅದು ಸಮಾನವಾಗಿರುವುದರಿಂದ ದೇಹ ಬ್ರಾಹ್ಮಣ ಅಲ್ಲ.

ಹಾಗಾದರೆ ಜಾತಿ ಬ್ರಾಹ್ಮಣವೆ? ಅಲ್ಲ,

 ಏಕೆಂದರೆ ಅನೇಕ ಋಷಿಗಳು ಬೇರೆ ಬೇರೆ ಜಾತಿಯಿಂದ ಹುಟ್ತಿದವರಾಗಿದ್ದಾರೆ. ಋಷ್ಯಶೃಂಗನು ಜಿಂಕೆಯಿಂದ, ಕೌಶಿಕನು ಕುಶ (ಗರಿಕೆ) ಹುಲ್ಲಿನಿಂದ, ಜಂಬೂಕನು ನರಿಯಿಂದ ವಾಲ್ಮೀಕಿಯು ಹುತ್ತದಿಂದ, ವ್ಯಾಸನು ಮೀನುಗಾರನ ಮಗಳಿಂದ, ಗೌತಮನು ಮೊಲದಿಂದ ವಸಿಷ್ಠನು ಊರ್ವಶಿಯಿಂದ, ಅಗಸ್ತ್ಯನು ನೀರಿನ ಕುಂಭದಿಂದ ಹೀಗೆ ಅನೇಕ ಋಷಿಗಳು ಎಲ್ಲೆಲ್ಲೊ ಹೇಗೋ ಜನಿಸಿದರು. ಆದರೆ ಅವರು ತಮ್ಮ ಆಧ್ಯಾತ್ಮಿಕ ಸಾಧನೆಗಳಿಂದ ಮಹಾಜ್ಞಾನಿಗಳಾಗಿ ದಿವ್ಯೋಪದೇಶ ಮಾಡುವ ಸಂತರಾದರು. ಆದ್ದರಿಂದ ಜಾತಿ ಬ್ರಾಹ್ಮಣವಲ್ಲ.

ಜ್ಞಾನ ಬ್ರಾಹ್ಮಣವೆ?

 ಅಲ್ಲ ಎಷ್ಟೋ ಕ್ಷತ್ರಿಯರೂ ಕೂಡ ದಿವ್ಯಜ್ಞಾನ ಪಾರಂಗತರಾಗಿದ್ದಾರೆ. ಉದಾಹರಣೆಗೆ ಜನಕಾದಿ ರಾಜರು*ಆದ್ದರಿಂದ ಜ್ಞಾನವೂ ಬ್ರಾಹ್ಮಣವಲ್ಲ.

ಹಾಗಾದರೆ ಕರ್ಮ ಬ್ರಾಹ್ಮಣವೆ?

 ಅಲ್ಲ, ಏಕೆಂದರೆ ಹಿಂದಿನ ಜನ್ಮದ ಫಲವನ್ನು ಈ ಜನ್ಮದಲ್ಲಿ ಅನುಭವಿಸುತ್ತೇವೆ. ಅದನ್ನು ಪ್ರಾರಬ್ಧ ಕರ್ಮ ಎನ್ನಲಾಗುತ್ತದೆ. ಹಿಂದಿನ, ಈಗಿನ ಕರ್ಮಫಲಗಳು ಮುಂದಿನ ಜನ್ಮಕ್ಕೆ ಸಾಗಿಬರುತ್ತವೆ. ಅವನ್ನು ಸಂಚಿತ ಎನ್ನುತ್ತೇವೆ. ಎಲ್ಲರಿಗೂ ಕರ್ಮ ಒಂದೇ ಆಗಿರುತ್ತದೆ. ಅವರು ಇಂದು ಮಾಡುವ ಕಾರ್ಯ ಪ್ರಾರಾಬ್ಧ ಹಾಗೂ ಸಂಚಿತ ಕರ್ಮಗಳ ಫಲವಾಗಿರುತ್ತದೆ. ಅದ್ದರಿಂದ ಕರ್ಮ ಬ್ರಾಹ್ಮಣವಲ್ಲ.

ಹಾಗಾದರೆ, ಧಾರ್ಮಿಕ ಕಾರ್ಯಗಳನ್ನು ಮಾಡುವವನು ಬ್ರಾಹ್ಮಣನೆ? ಅಲ್ಲ, ಎಷ್ಟೋ ಕ್ಷತ್ರಿಯರು ಚಿನ್ನವನ್ನು ದಾನವಾಗಿ ನೀಡುತ್ತಾರೆ. ಆದ್ದರಿಂದ ಅವರು ಸತ್ಕಾರ್ಯ ಮಾಡಿದಂತಾಗುತ್ತದೆ. ಅ ಸತ್ಕಾರ್ಯವೇ ಬ್ರಾಹ್ಮಣ ವಾಗುವುದಿಲ್ಲವಲ್ಲವೇ..

ಹಾಗಾದರೆ ನಿಜವಾಗಿಯೂ ಬ್ರಾಹ್ಮಣನಾರು?
ಯಾರು ತನ್ನ ಆತ್ಮವನ್ನು ಸಾಕ್ಷಾತ್ಕಾರ ಮಾಡಿಕೊಂಡಿರುತ್ತಾನೋ ಅವನೇ ಬ್ರಾಹ್ಮಣ.

ಯಾರು ತನ್ನ ಆತ್ಮವನ್ನು ಅಂಗೈಯೊಳಗಣ ಅಂಜೂರವನ್ನು ಕಾಣುವಂತೆ ಕಾಣುವನೋ, ಯಾರಿಗೆ ಹಸಿವು, ನೀರಡಿಕೆ, ದುಃಖ, ಗೊಂದಲ, ವೃದ್ಧಾಪ್ಯ ಮತ್ತು ಸಾವಿನ ಭೀತಿ ಇರುವುದಿಲ್ಲವೊ, ಯಾರಿಗೆ ಸತ್ಯ, ಜ್ಞಾನ, ಆನಂದ ಮತ್ತು ಚಿರಂತನ ಭಾವಗಳ ಅರಿವಿದೆಯೋ, ಯಾರಿಗೆ ಜಡ ಮತ್ತು ಸೂಕ್ಷ್ಮ ವಸ್ತುಗಳ ಒಳಗೆ ಮತ್ತು ಹೊರಗೆ ವ್ಯಾಪಿಸಿರುವ ಆಕಾಶವನ್ನು ಮತ್ತು ತರ್ಕಾತೀತವಾದ ಸತ್ಯವನ್ನು ತನ್ನ ಅಂತಃ ಶಕ್ತಿಯಿಂದ ಕಾಣುವನೋ ಅವನು ಬ್ರಾಹ್ಮಣ

ಯಾರು ಭೌತಿಕ ಜಗತ್ತಿನ ಆಸೆ ಆಮಿಷಗಳನ್ನು ಶಮ, ದಮ, ಉಪ್ರತಿ, ತಿತಿಕ್ಷ, ಸಮಾಧಾನ ಮತ್ತು ಶ್ರದ್ಧೆಗಳ ಮೂಲಕ ಗೆದ್ದಿರುವನೋ ಅವನು ಬ್ರಾಹ್ಮಣ

ವೇದಗಳು, ಸ್ಮೃತಿಗಳು, ಇತಿಹಾಸ ಮತ್ತು ಪುರಾಣಗಳು ಅದನ್ನೇ ಹೇಳುತ್ತವೆ. ಮಾನವನು ತನ್ನ ಆತ್ಮವನ್ನು ಸತ್ – ಚಿತ್ – ಆನಂದ ಸ್ಥಿತಯಲ್ಲಿ ಧ್ಯಾನಿಸಬೇಕು.

 ಅದೇ ಅದ್ವೈತ ಸಿದ್ಧಾಂತ ಎಂದು ವಜ್ರಸೂಚಿಕೋಪನಿಷತ್ತು ಹೇಳುತ್ತದೆ.
ಲೋಕ ಸಮಸ್ತ ಸುಖಿನೋ ಭವಂತು





Comments

Post a Comment

Popular posts from this blog

ಶ್ರೀ ಚಕ್ರ ಮತ್ತು ಅದರ ಮಹಿಮೆ

ಶ್ರೀಚಕ್ರ ಅತ್ಯಂತ ಮಹಿಮಾನ್ವಿತ ಚಕ್ರ. ಅನಂತ, ಅದ್ಭುತ ಸೃಷ್ಟಿಯ ದೈವೀ ತಂತ್ರದ ಚೌಕಟ್ಟು ಸೃಷ್ಟಿಯ ಜನನಿ ಶ್ರೀ ಲಲಿತೆಯ ಮೂರ್ತ ರೂಪದ ರೇಖಾಯಂತ್ರ. ಆದಿ ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿದೇವಿಯ ಸಾತ್ವಿಕ ರೂಪವು ಉಗಮಿಸುವಂತೆ ಮಾಡಿದರು. ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಜೊತೆಗೆ ಶಬ್ಧವನ್ನು ದೃಶ್ಯರೂಪವಾಘಿ ಪರಿವರ್ತಿಸುವ ವಿಜ್ಞಾನ ಶಬ್ಧ ಹಾಗೂ ಕಂಪನಗಳ ಪ್ರಭಾವದ ಅರಿವು ಮೂಡಿಸುತ್ತಿದೆ, ಶ್ರೀಚಕ್ರದ ಮೇಲೆ ಇಟ್ಟ ದೃಷ್ಟಿ ನರಮಂಡಲದಲ್ಲಿ ಉಂಟಾಗುವ ಕಂಪನ ಇಇಜಿಯಲ್ಲಿ (ಎಲೆಕ್ಟ್ರೋ ಎನ್ ಕೆಫಲೋಗ್ರಾಫ್) ಆಲ್ಫಾ ಅಲೆ ಹೊರಡಿಸುತ್ತದೆ. ಧ್ಯಾನ ಸ್ಥಿತಿಯಲ್ಲೂ ಈ ಅಲೆ ನಿಧಾನಗತಿಯಲ್ಲಿ ಹೊರಹೊಮ್ಮುತ್ತದೆ, ಯಾವುದೇ ಇತರ ಚಕ್ರ ವೀಕ್ಷಿಸಿದಾಗ ಇಇಜಿ ಅಲೆಗಳಲ್ಲಿ ಬದಲಾವಣೆ ಕಂಡುಬರುವುದಿಲ್ಲ, ಶಕ್ತಿಯುತ ಅಣು ಕ್ಷಣಗಳಿಂದಾದ ಅಲೆ ವಿದ್ಯುತ್ ಅಯಸ್ಕಾಂತ ಬಲಕಾರಕ ಶಕ್ತಿ ಸಮಾಗಮಕ್ಕೆ ನಾಂದಿ, ಶ್ರೀಚಕ್ರದ ಮೂಲಕ ದಿವ್ಯ ಮಂತ್ರೋಚ್ಚಾರಗಳಿಂದಾದ ಶಬ್ಧ ಬ್ರಹ್ಮ ಶಕ್ತಿ ಇದನ್ನು ಸಾಧಿಸುತ್ತದೆಂದು ಭಾವಿಸಬಹುದು, ಒಂದು ದೃಷ್ಟಿಯಲ್ಲಿ ಆದಿ ಶಂಕರಾಚಾರ್ಯರನ್ನು ಕಣ ಭೌತ ಶಾಸ್ತ್ರದ ಪಿತಾಮಹ ಎನ್ನಬಹುದು. ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನೇ ನಿಗ್ರಹಿಸಿದರು, ಶ್ರೀ ಸೌಂದ...

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ ಅಂದರೆ .. ಎಂಜಲು, ಶಿವನ ನಿರ್ಮಾಲ್ಯ, ವಾಂತಿ, ಹೆಣದ ಬಟ್ಟೆ, ಕಾಗೆಯ ಮಲದಿಂದ ಹುಟ್ಟಿದ್ದು. ಈ ಐದು ಅತ್ಯಂತ ಪವಿತ್ರವಾದವುಗಳು...!! ಎಂದು . ೧. ಉಚ್ಚಿಷ್ಟಮ್ - ಎಂದರೆ ಎಂಜಲು . ಹಾಲು ಕರುವಿನ ಎಂಜಲು. ಹಸುವಿನ ಹಾಲನ್ನು ಕರು ಕುಡಿದು ಹಾಗೇ ಬಿಟ್ಟಿರುತ್ತದೆ . ಆ ಎಂಜಲು ಹಾಲನ್ನೇ ನಾವು ಉಪಯೋಗಿಸುತ್ತೇವೆ. ಕರುವಿನಿಂದ ಎಂಜಲಾದ ಹಾಲು ದೇವರಿಗೆ , ಪಂಚಾಮೃತಾಭಿಷೇಕಕ್ಕೆ ಬೇಕಾದ ಅತ್ಯಂತ ಪವಿತ್ರ ವಸ್ತು. ೨. ಶಿವನಿರ್ಮಾಲ್ಯಮ್ - ಎಂದರೆ ಶಿವನ ಜಟೆಯಿಂದ ಹೊರಗೆ ಬಂದ ಗಂಗೆ . ಗಂಗಾ ನದಿ ಸ್ವರ್ಗಲೋಕದಿಂದ ಭೂಲೋಕಕ್ಕೆ ಬರುವಾಗ ಅಹಂಕಾರದಿಂದ ಬರುತ್ತಿದ್ದಳು . ಆಗ ಗಂಗೆಯ ಗರ್ವವನ್ನು ದಮನ ಮಾಡುವುದಕ್ಕಾಗಿ ಪರಶಿವನು ಆ ಗಂಗೆಯನ್ನು ತನ್ನ ಜಟೆಯ ಮಧ್ಯೆ ಕಟ್ಟಿಹಾಕಿಬಿಟ್ಟ.  ಅನಂತರ ಆ ಜಟೆಯಿ೦ದ ಗಂಗಾನದಿಯನ್ನು ಹೊರಕೆ ಹಾಕಿದ.  ಶಿವನ ಜಟೆಯಲ್ಲಿದ್ದು ಅಲ್ಲಿಂದ ಮುಕ್ತಳಾದ್ದರಿಂದ ಗಂಗಾನದಿಯು ಶಿವನ ನಿರ್ಮಾಲ್ಯವಾಯಿತು.  ಆದರೂ ಈ ಗಂಗೆಯು ಪವಿತ್ರ. ೩. ವಮನಮ್ - ಎಂದರೆ ವಾಂತಿ . ಜೇನುತುಪ್ಪ . ಜೇನುಹುಳುಗಳು ಬೇರೆಬೇರೆಯ ಗಿಡಮರಗಳಿಂದ ಮಕರಂದವನ್ನು ಬಾಯಲ್ಲಿ ಹಿಡಿದು ತಂದು,  ಬಾಯಿಂದಲೇ ಆ ಮಕರಂದವನ್ನು ಗೂಡಿನಲ್ಲಿ ಇಟ್ಟಿರುತ್ತವೆ.  ಅದೇ ಜೇನು ತುಪ್ಪ.  ಇದು ಜೇನುಹುಳುಗಳ ವಮನ. ಆದರೆ ಜೇನು...

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು? ಏಕೆ?

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು?  ಏಕೆ? ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು. ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ| ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:|| ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ. ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು  ?  ಏಕೆ? ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ. ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇ...