Skip to main content

ಗುರುರೇಕಃ ಸದಾ ಸೇವ್ಯಃ ಸಂಸಾರೋದ್ಧಾರಣಕ್ಷಮಃ


ತಂದೆ, ತಾಯಿ, ಸ್ನೇಹಿತ, ಅಣ್ಣ, ತಮ್ಮ ಎಲ್ಲರೂ ಸಂಸಾರಕ್ಕೆ ಕಾರಣರು. ಗುರುಗಳೊಬ್ಬರೇ ಸಂಸಾರದಿಂದ ಉದ್ಧಾರ ಮಾಡಲು ಸಮರ್ಥರು. ಆ ಕಾರಣ ಗುರುವೇ ನಮ್ಮಿಂದ ಪೂಜಿಸಲು ಅರ್ಹ’ (ಪಿತಾ ಮಾತಾ ಸುಹೃತ್ ಭ್ರಾತಾ ಸರ್ವೆ ಸಂಸಾರಹೇತವಃ | ಗುರುರೇಕಃ ಸದಾ ಸೇವ್ಯಃ ಸಂಸಾರೋದ್ಧಾರಣಕ್ಷಮಃ ||).

ಈ ಮಾತು ನಮ್ಮ ಪ್ರಾಚೀನ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಇರುವ ಮಹತ್ತ್ವವನ್ನು ತೋರಿಸುತ್ತದೆ. ಉಳಿದವರು ಮಾಡುವ ಉಪಕಾರ ಈ ದೇಹಕ್ಕೆ ಮಾತ್ರ ಸಂಬಂಧಪಟ್ಟದ್ದು. ಆದರೆ ಗುರುಗಳು ಮಾಡುವ ಉಪಕಾರ ಜನ್ಮಜನ್ಮಾಂತರಕ್ಕೂ, ಮೋಕ್ಷಕ್ಕೂ ಸಂಬಂಧಪಡುವ ಉಪಕಾರ.

ಒಂದು ದಿನ ಅಲೆಗ್ಸಾಂಡರ್ ಮಹಾರಾಜನು ದಾರಿಯಲ್ಲಿ ನಡೆದುಹೋಗುತ್ತಿದ್ದಾನೆ. ಮಧ್ಯದಲ್ಲಿ ಆತನ ಗುರು ಅರಿಸ್ಟಾಟಲ್​ನ ಭೇಟಿ ಆಗುತ್ತದೆ. ತಕ್ಷಣವೇ ಅಜೇಯ ದೊರೆ ಅಲೆಗ್ಸಾಂಡರನು ಮಂಡಿಯೂರಿ ತಲೆ ಬಾಗಿದಾಗ ಜನರು ಬೆರಗಾದರು. ರಾಜನ ವಂದನೆಯನ್ನು ಸ್ವೀಕರಿಸಿದ ಗುರು ಅರಿಸ್ಟಾಟಲ್ ಒಂದೂ ಮಾತನಾಡದೆ ಹೊರಟುಹೋದರು. ಆ ಬಳಿಕ ರಾಜನಿಗೆ ಮಂತ್ರಿ ಕೇಳಿದ, ‘ಮಹಾಪ್ರಭು! ತಾವು ಅಜೇಯ ವೀರರು. ನಿಮ್ಮ ತಂದೆ ನಿಮಗೆ ಸುಂದರ ದೇಹವನ್ನಿತ್ತು ಯುದ್ಧಕಲೆಯನ್ನು ಕಲಿಸಿ ಬೆಳೆಸಿ, ಸಮಸ್ತ ಐಶ್ವರ್ಯಗಳನ್ನು ಕೊಟ್ಟು ನಿಮ್ಮನ್ನು ಏಕಛತ್ರಾಧಿಪತಿಗಳನ್ನಾಗಿ ಮಾಡಿದ್ದಾರೆ. ಅಂತಹ ತಂದೆಗಿಂತ ಹೆಚ್ಚಿನ ಗೌರವವನ್ನು ಆ ಭಿಕ್ಷು

ಅವದೂತ ನಾದಾನಂದ ಗುರುಗಳು

ಕವೇಷದ ಬಡ ಗುರುವಿಗೆ ಕೊಡುತ್ತಿರುವಿರಿ. ಏಕೆ?’ ಆಗ ಅಲೆಗ್ಸಾಂಡರ್, ‘ಮಂತ್ರಿಗಳೆ! ನಮ್ಮ ತಂದೆ ನನ್ನನ್ನು ಮೇಲಿನಿಂದ ಭೂಮಿಗೆ ತಂದರು. ಆದರೆ ಗುರುವು ನನ್ನನ್ನು ಈ ಭೂಮಿಯಿಂದ ಮೇಲೆ ಅಂದರೆ ಭಗವಂತನೆಡೆಗೆ ಕರೆದುಕೊಂಡು ಹೋಗುತ್ತಾರೆ. ನನ್ನ ತಂದೆ ನನಗೆ ನಾಶವಾಗುವ ದೇಹವನ್ನು, ಸಂಪತ್ತನ್ನು ಕೊಟ್ಟರು. ಆದರೆ ನನ್ನ ಗುರುವು ನನಗೆ ಅಮರ ಸಿರಿಯನ್ನು, ದಿವ್ಯ ಜೀವನವನ್ನು ಕರುಣಿಸಿದ್ದಾರೆ. ಅಂತಹ ಮಹಾಗುರುವನ್ನು ನಾನು ಹಾಗೆ ಗೌರವಿಸದೆ ಇರಬಹುದೆ?’ ಎಂದ.

ತಂದೆ-ತಾಯಿ ನಮಗೆ ಲೌಕಿಕ ಸಂಪತ್ತನ್ನು ಕೊಡಬಹುದು. ಆದರೆ ಮೋಕ್ಷಕ್ಕೆ ಕರೆದೊಯ್ಯಲಾರರು. ಉತ್ತಮ ತತ್ವಜ್ಞಾನ ಕೊಟ್ಟು, ಮೋಕ್ಷ ಕೊಡಿಸಿ, ಶಾಶ್ವತವಾಗಿ ಸುಖಿಗಳಾಗಿರುವಂತೆ ಮಾಡುವ ಸಾಮರ್ಥ್ಯ ಗುರುಗಳಿಗೆ ಮಾತ್ರ ಇರುವಂತಹದ್ದು. ಹೀಗೆ ಗುರುಗಳು ನಮ್ಮ ಜೀವನದಲ್ಲಿ ಪ್ರಧಾನ ಸ್ಥಾನ ಪಡೆದಿದ್ದಾರೆ.

Comments

  1. ಗುರುವೇ ಸರ್ವಸ್ವ ಎನ್ನುವುದನ್ನು ಬಿಂಬಿಸಿದೆ

    ReplyDelete

Post a Comment

Popular posts from this blog

ಶ್ರೀ ಚಕ್ರ ಮತ್ತು ಅದರ ಮಹಿಮೆ

ಶ್ರೀಚಕ್ರ ಅತ್ಯಂತ ಮಹಿಮಾನ್ವಿತ ಚಕ್ರ. ಅನಂತ, ಅದ್ಭುತ ಸೃಷ್ಟಿಯ ದೈವೀ ತಂತ್ರದ ಚೌಕಟ್ಟು ಸೃಷ್ಟಿಯ ಜನನಿ ಶ್ರೀ ಲಲಿತೆಯ ಮೂರ್ತ ರೂಪದ ರೇಖಾಯಂತ್ರ. ಆದಿ ಶಂಕರಾಚಾರ್ಯರು ಉಗ್ರಶಕ್ತಿ ಸೋಪಾನವಾಗಿದ್ದ ಶ್ರೀಚಕ್ರವನ್ನು ಪರಿಷ್ಕರಿಸಿ ಮಂಗಳಕರ ಶಕ್ತಿದೇವಿಯ ಸಾತ್ವಿಕ ರೂಪವು ಉಗಮಿಸುವಂತೆ ಮಾಡಿದರು. ಕ್ರಮಬದ್ಧವಾಗಿ ರಚಿಸಿದ ಶ್ರೀಚಕ್ರದ ಮೇಲೆ ಲೇಸರ್ ಕಿರಣಗಳನ್ನು ಹಾಯಿಸಿದಾಗ ಶ್ರೀಲಲಿತಾ ದೇವಿಯ ಚಿತ್ರ ಗೋಚರಿಸಿದ್ದು ದಾಖಲಾಗಿದೆ. ಜೊತೆಗೆ ಶಬ್ಧವನ್ನು ದೃಶ್ಯರೂಪವಾಘಿ ಪರಿವರ್ತಿಸುವ ವಿಜ್ಞಾನ ಶಬ್ಧ ಹಾಗೂ ಕಂಪನಗಳ ಪ್ರಭಾವದ ಅರಿವು ಮೂಡಿಸುತ್ತಿದೆ, ಶ್ರೀಚಕ್ರದ ಮೇಲೆ ಇಟ್ಟ ದೃಷ್ಟಿ ನರಮಂಡಲದಲ್ಲಿ ಉಂಟಾಗುವ ಕಂಪನ ಇಇಜಿಯಲ್ಲಿ (ಎಲೆಕ್ಟ್ರೋ ಎನ್ ಕೆಫಲೋಗ್ರಾಫ್) ಆಲ್ಫಾ ಅಲೆ ಹೊರಡಿಸುತ್ತದೆ. ಧ್ಯಾನ ಸ್ಥಿತಿಯಲ್ಲೂ ಈ ಅಲೆ ನಿಧಾನಗತಿಯಲ್ಲಿ ಹೊರಹೊಮ್ಮುತ್ತದೆ, ಯಾವುದೇ ಇತರ ಚಕ್ರ ವೀಕ್ಷಿಸಿದಾಗ ಇಇಜಿ ಅಲೆಗಳಲ್ಲಿ ಬದಲಾವಣೆ ಕಂಡುಬರುವುದಿಲ್ಲ, ಶಕ್ತಿಯುತ ಅಣು ಕ್ಷಣಗಳಿಂದಾದ ಅಲೆ ವಿದ್ಯುತ್ ಅಯಸ್ಕಾಂತ ಬಲಕಾರಕ ಶಕ್ತಿ ಸಮಾಗಮಕ್ಕೆ ನಾಂದಿ, ಶ್ರೀಚಕ್ರದ ಮೂಲಕ ದಿವ್ಯ ಮಂತ್ರೋಚ್ಚಾರಗಳಿಂದಾದ ಶಬ್ಧ ಬ್ರಹ್ಮ ಶಕ್ತಿ ಇದನ್ನು ಸಾಧಿಸುತ್ತದೆಂದು ಭಾವಿಸಬಹುದು, ಒಂದು ದೃಷ್ಟಿಯಲ್ಲಿ ಆದಿ ಶಂಕರಾಚಾರ್ಯರನ್ನು ಕಣ ಭೌತ ಶಾಸ್ತ್ರದ ಪಿತಾಮಹ ಎನ್ನಬಹುದು. ಬೀಜಾಕ್ಷರಗಳ ಅಳವಡಿಕೆಯಿಂದ ಶ್ರೀಚಕ್ರದ ಪರಾಶಕ್ತಿಯ ಚಟುವಟಿಕೆಯನ್ನೇ ನಿಗ್ರಹಿಸಿದರು, ಶ್ರೀ ಸೌಂದ...

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ

ಉಚ್ಚಿಷ್ಟಮ್ ಶಿವನಿರ್ಮಾಲ್ಯಂ ವಮನಮ್ ಶವಕರ್ಪಟಮ್ ಕಾಕವಿಷ್ಠಾಸಮುತ್ಪನ್ನಮ್ ಪಂಚೈತೇತಿಪವಿತ್ರಕಾಃ ಅಂದರೆ .. ಎಂಜಲು, ಶಿವನ ನಿರ್ಮಾಲ್ಯ, ವಾಂತಿ, ಹೆಣದ ಬಟ್ಟೆ, ಕಾಗೆಯ ಮಲದಿಂದ ಹುಟ್ಟಿದ್ದು. ಈ ಐದು ಅತ್ಯಂತ ಪವಿತ್ರವಾದವುಗಳು...!! ಎಂದು . ೧. ಉಚ್ಚಿಷ್ಟಮ್ - ಎಂದರೆ ಎಂಜಲು . ಹಾಲು ಕರುವಿನ ಎಂಜಲು. ಹಸುವಿನ ಹಾಲನ್ನು ಕರು ಕುಡಿದು ಹಾಗೇ ಬಿಟ್ಟಿರುತ್ತದೆ . ಆ ಎಂಜಲು ಹಾಲನ್ನೇ ನಾವು ಉಪಯೋಗಿಸುತ್ತೇವೆ. ಕರುವಿನಿಂದ ಎಂಜಲಾದ ಹಾಲು ದೇವರಿಗೆ , ಪಂಚಾಮೃತಾಭಿಷೇಕಕ್ಕೆ ಬೇಕಾದ ಅತ್ಯಂತ ಪವಿತ್ರ ವಸ್ತು. ೨. ಶಿವನಿರ್ಮಾಲ್ಯಮ್ - ಎಂದರೆ ಶಿವನ ಜಟೆಯಿಂದ ಹೊರಗೆ ಬಂದ ಗಂಗೆ . ಗಂಗಾ ನದಿ ಸ್ವರ್ಗಲೋಕದಿಂದ ಭೂಲೋಕಕ್ಕೆ ಬರುವಾಗ ಅಹಂಕಾರದಿಂದ ಬರುತ್ತಿದ್ದಳು . ಆಗ ಗಂಗೆಯ ಗರ್ವವನ್ನು ದಮನ ಮಾಡುವುದಕ್ಕಾಗಿ ಪರಶಿವನು ಆ ಗಂಗೆಯನ್ನು ತನ್ನ ಜಟೆಯ ಮಧ್ಯೆ ಕಟ್ಟಿಹಾಕಿಬಿಟ್ಟ.  ಅನಂತರ ಆ ಜಟೆಯಿ೦ದ ಗಂಗಾನದಿಯನ್ನು ಹೊರಕೆ ಹಾಕಿದ.  ಶಿವನ ಜಟೆಯಲ್ಲಿದ್ದು ಅಲ್ಲಿಂದ ಮುಕ್ತಳಾದ್ದರಿಂದ ಗಂಗಾನದಿಯು ಶಿವನ ನಿರ್ಮಾಲ್ಯವಾಯಿತು.  ಆದರೂ ಈ ಗಂಗೆಯು ಪವಿತ್ರ. ೩. ವಮನಮ್ - ಎಂದರೆ ವಾಂತಿ . ಜೇನುತುಪ್ಪ . ಜೇನುಹುಳುಗಳು ಬೇರೆಬೇರೆಯ ಗಿಡಮರಗಳಿಂದ ಮಕರಂದವನ್ನು ಬಾಯಲ್ಲಿ ಹಿಡಿದು ತಂದು,  ಬಾಯಿಂದಲೇ ಆ ಮಕರಂದವನ್ನು ಗೂಡಿನಲ್ಲಿ ಇಟ್ಟಿರುತ್ತವೆ.  ಅದೇ ಜೇನು ತುಪ್ಪ.  ಇದು ಜೇನುಹುಳುಗಳ ವಮನ. ಆದರೆ ಜೇನು...

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು? ಏಕೆ?

ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು?  ಏಕೆ? ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು. ತುಳಸಿ ಕಾನನಂ ಯತ್ರ ಯತ್ರಪದ್ಮವ ನಾನಿಚ| ವಸಂತಿ ವೈಷ್ಣವಾಯತ್ರ ತತ್ರ ಸನ್ನಿಹಿತೋ ಹರಿ:|| ಅಂದರೆ ತುಳಸಿವನವು ಹಬ್ಬಿರುವ ಜಾಗದಲ್ಲಿ ಶ್ರೀ ಹರಿಯು ಸದಾ ವಾಸಮಾಡುತ್ತಾನೆ. ಶೈವರು, ವೈಷ್ಣವರು, ಗಾಣಸತ್ಯರು, ದೇವೀ ಉಪಾಸಕರು ಮೊದಲಾದ ಎಲ್ಲಾ ಪಂಥಗಳ ಆಸ್ತಿಕ ಹಿಂದೂಗಳೂ ತಮ್ಮ ಮನೆಯಂಗಳಗಳಲ್ಲಿ ತುಳಸಿ ವೃಂದಾವನ ನಿರ್ಮಿಸಿ ತುಳಸಿಯನ್ನು ನೆಟ್ಟು ಪೂಜಿಸುತ್ತಾರೆ. ತುಳಸೀ ಕಟ್ಟೆಯಲ್ಲಿ ಎಷ್ಟು ಹೊತ್ತಿಗೆ ದೀಪ ಹಚ್ಚಬೇಕು  ?  ಏಕೆ? ಹಗಲು ಹೊತ್ತಿನಲ್ಲಿ ವಾತಾವರಣದಲ್ಲಿನ ಅನಿಷ್ಟ ಶಕ್ತಿಗಳು ಸುಪ್ತವಾಗಿದ್ದು ಸೂರ್ಯಾಸ್ತದ ಬಳಿಕ ಅವುಗಳ ಪ್ರಕಟೀಕರಣದಿಂದ ಜೀವಗಳಿಗೆ ಅಪಾರ ತೊಂದರೆಯಾಗತೊಡಗುತ್ತದೆ. ಇದರಿಂದಾಗಿಯೇ ಸಂಧ್ಯಾಕಾಲದಲ್ಲಿ ದೃಷ್ಟಿ ತಗಲುವುದು, ರಾತ್ರಿ ಕಾಲದಲ್ಲಿ ದುಷ್ಕೃತ್ಯಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ತೊಂದರೆಗಳಿಂದ ಪಾರಾಗಲು ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಹಚ್ಚುವುದು, ಊದುಬತ್ತಿ ಉರಿಸುವುದು, ಶಂಖಧ್ವನಿ ಮಾಡುವುದು, ಜಾಗಟೆ, ತಾಳ ಬಾರಿಸುವುದು, ಭಜನೆ ಮಾಡುವುದು, ಉಪನಯನವಾದವರು ಸಂಧ್ಯಾವಂದನೆ ಮಾಡುವುದು, ಭಸ್ಮಧಾರಣೆ ಇ...